ಉದಯವಾಹಿನಿ, ಢಾಕಾ : ಇತ್ತೀಚೆಗೆ ನಿಧನರಾದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ (80) ಅವರ ಅಂತ್ಯಕ್ರಿಯೆ ಡಿಸೆಂಬರ್ 31ರಂದು ಢಾಕಾದಲ್ಲಿ ನಡೆಯಿತು. ಜಿಯಾ ಅವರ ಅಂತ್ಯಕ್ರಿಯೆಗೂ ಮುನ್ನ ಅವರ ಪುತ್ರ ತಾರಿಕ್ ಅವರಿಗೆ ಪತ್ರದ ಮೂಲಕ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದರು. 17 ವರ್ಷಗಳ ಸ್ವಯಂ ವನವಾಸದ ನಂತರ ಇತ್ತೀಚೆಗೆ ಬಾಂಗ್ಲಾದೇಶಕ್ಕೆ ಮರಳಿದ ಜಿಯಾ ಅವರ ಮಗ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಹಂಗಾಮಿ ಮುಖ್ಯಸ್ಥ ತಾರಿಕ್ ರೆಹಮಾನ್ ಅವರಿಗೆ ಮೋದಿ ಸಂತಾಪ ಸೂಚಿಸಿ ಪತ್ರ ಬರೆದಿದ್ದಾರೆ.

ರೆಹಮಾನ್ ಅವರಿಗೆ ಬರೆದ ಪತ್ರದಲ್ಲಿ ಮೋದಿ, ಜಿಯಾ ಅವರ ನಿಧನವು ತುಂಬಲಾರದ ನಷ್ಟವಾಗಿದ್ದರೂ, ಅವರ ದೃಷ್ಟಿಕೋನ ಮತ್ತು ಪರಂಪರೆ ಶಾಶ್ವತವಾಗಿ ಉಳಿಯುತ್ತದೆ ಎಂದು ಹೇಳಿದರು. ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬುಧವಾರ ಬಾಂಗ್ಲಾದೇಶಕ್ಕೆ ತೆರಳಿದ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪ್ರಧಾನಿ ಮೋದಿ ಅವರ ಪತ್ರವನ್ನು ತಾರಿಕ್ ರೆಹಮಾನ್ ಅವರಿಗೆ ಹಸ್ತಾಂತರಿಸಿದರು.

Leave a Reply

Your email address will not be published. Required fields are marked *

error: Content is protected !!