ಉದಯವಾಹಿನಿ , ಕೋಲ್ಕತ್ತಾ: ವಿಧಾನಸಭಾ ಚುನಾವಣೆಯ ದಿನಗಳು ಹತ್ತಿರವಾಗುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಜಾರಿ ನಿರ್ದೇಶನಾಲಯವು ಕೋಲ್ಕತ್ತಾದ ಹಲವು ಕಡೆಗಳಲ್ಲಿ ದಾಳಿ ( ನಡೆಸಿದೆ.
ಜಾರಿ ನಿರ್ದೇಶನಾಲಯವು ಕೋಲ್ಕತ್ತಾದ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (I-PAC) ಕಚೇರಿ ಮತ್ತು ಅದರ ಹಿರಿಯ ಅಧಿಕಾರಿ ಪ್ರತೀಕ್ ಜೈನ್ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ನಗರದಾದ್ಯಂತ ಕನಿಷ್ಠ 5 ಸ್ಥಳಗಳಲ್ಲಿ ಇಡಿ ತಂಡ ದಾಳಿ ನಡೆಸಿದೆ. ಆದ್ರೆ ಈವರೆಗೆ ಯಾವುದೇ ಮಾಹಿತಿಯನ್ನ ಬಹಿರಂಗಪಡಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಐ-ಪಿಎಸಿ ಕಚೇರಿಗೆ ಬಂದ ಸಿಎಂ ಮಮತಾ ಬ್ಯಾನರ್ಜಿ ಪ್ರಮುಖ ಮಾಹಿಯುಳ್ಳ ಫೈಲ್ವೊಂದನ್ನ ಹೊತ್ತೊಯ್ದಿದ್ದಾರೆ. ಹಸಿರು ಬಣ್ಣದ ಕಡತ ಹಿಡಿದು ಹೋಗುತ್ತಿರುವ ಫೋಟೋ & ವಿಡಿಯೋ ಕ್ಯಾಮೆರಾದಲ್ಲೂ ಸೆರೆಯಾಗಿದೆ. ಇದಕ್ಕೂ ಮುನ್ನ ಇಡಿ ದಾಳಿಯನ್ನುದ್ದೇಶಿಸಿ ಮಾತನಾಡಿದ ದೀದಿ, ಇದು ಉದ್ದೇಶಪೂರ್ವಕ ಮತ್ತು ರಾಜಕೀಯ ಪ್ರೇರಿತ ದಾಳಿ. ಜೊತೆಗೆ ಬಿಜೆಪಿಯು ಅನೈತಿಕ ವಿಧಾನಗಳ ಮೂಲಕ ಬಂಗಾಳವನ್ನ ವಶಪಡಿಸಿಕೊಳ್ಳಲು ಮಾಡುತ್ತಿರುವ ಪ್ರಯತ್ನದ ಭಾಗವಾಗಿದೆ. ಪ್ರಜಾಸತ್ತಾತ್ಮಕವಾಗಿ ಹೋರಾಡಲು ಸಾಧ್ಯವಾಗದ ಬಿಜೆಪಿ ಈಗ ಇ.ಡಿ. ಯನ್ನ ಅಸ್ತ್ರವಾಗಿ ಬಳಸಿಕೊಂಡು, ಪಕ್ಷದ ದಾಖಲೆಗಳು, ಕಾರ್ಯತಂತ್ರಗಳು, ಅಭ್ಯರ್ಥಿಗೆ ಸಂಬಂಧಿಸಿದ ವಿವರಗಳು ಮತ್ತು ನಿರ್ಣಾಯಕ ದಾಖಲೆಗಳನ್ನ ಬಲವಂತವಾಗಿ ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ರು.
