ಉದಯವಾಹಿನಿ, ರಾಮನಗರ: ಕೇಂದ್ರ ಸರ್ಕಾರ ರಾಜ್ಯಪಾಲರನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ಹೊರಹಾಕಿದ್ದಾರೆ. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಮೊಟಕು ವಿಚಾರವಾಗಿ ಮಾತನಾಡಿದ ಅವರು, ಅಧಿವೇಶನದಲ್ಲಿ ಕೇವಲ 5 ನಿಮಿಷ ಏನೋ ಓದಿ ಹೋಗಿದ್ದಾರೆ. ಸ್ವಲ್ಪ ಗೊಂದಲ ಆಯ್ತು, ರಾಮನಗರದಲ್ಲಿ ಮೀಟಿಂಗ್ ಇದ್ದ ಕಾರಣ ನಾನು ಈ ಕಡೆ ಬಂದೆ. ಸ್ವಾತಂತ್ರ‍್ಯ ಬಂದಾಗಲಿಂದಲೂ ಅಧಿಕಾರದಲ್ಲಿರೋ ಸರ್ಕಾರ ರೆಡಿ ಮಾಡಿಕೊಡುವ ಭಾಷಣವನ್ನೇ ರಾಜ್ಯ ಪಾಲರು ಓದುತ್ತಾರೆ. ಎಲ್ಲಾ ರಾಜ್ಯಗಳಲ್ಲೂ ಈ ಸಂಪ್ರದಾಯ ಇದೆ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವವನ್ನ ಶಿಥಿಲಗೊಳಿಸುವ ಕೆಲಸ ಮಾಡುತ್ತಿದೆ. ಗವರ್ನರ್ ಕೂಡಾ ಕಾನೂನು ಚೌಕಟ್ಟಿನಲ್ಲಿ ಅವರ ಕೆಲಸ ಮಾಡಬೇಕು ಎಂದರು.

ರಾಜ್ಯಪಾಲರು ಸ್ವತಂತ್ರವಾಗಿ ಕೆಲಸ ಮಾಡಲು ಬಿಜೆಪಿ ಬಿಡುತ್ತಿಲ್ಲ. ಕೇಂದ್ರಕ್ಕೆ ತಕ್ಕಂತೆ ರಾಜ್ಯ ಬಿಜೆಪಿಯೂ ತಾಳ ಹಾಕುತ್ತಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಬಿಜೆಪಿಯವರು ಸುಳ್ಳುಗಾರರು, ಅವರಿಗೆ ಕಾನೂನು, ಸಂವಿಧಾನದ ಅರಿವಿಲ್ಲ. ರಾಜ್ಯಪಾಲರು ಸಂವಿಧಾನಕ್ಕಿಂತ ದೊಡ್ಡವರಲ್ಲ. ಅವರು ಸಂವಿಧಾನದ ಚೌಕಟ್ಟಿನಲ್ಲೇ ಕೆಲಸ ಮಾಡಬೇಕು. ಸರ್ಕಾರದ ಭಾಷಣ ಓದದೇ ಹೋಗಿರೋದು ತಪ್ಪು. ಹಿಂದೆಯೂ ರಾಜ್ಯಪಾಲರ ವಿರುದ್ಧ ಬಿಜೆಪಿ ಘೋಷಣೆ ಕೂಗಿದ್ದರು. ಸ್ಪೀಕರ್ ವಿರುದ್ಧ ಘೋಷಣೆ ಕೂಗಿ ಪತ್ರ ಎಸೆದಿದ್ದರು. ಇಂತಹ ಬಿಜೆಪಿಯವರಿಂದ ನಾವು ನೀತಿ ಕಲಿಯಬೇಕಿಲ್ಲ ಎಂದು ಕಿಡಿಕಾರಿದರು.

Leave a Reply

Your email address will not be published. Required fields are marked *

error: Content is protected !!