ಉದಯವಾಹಿನಿ, ರಾಮನಗರ: ನನಗೆ ಮಾತಾಡೋ ಚಪಲ, ಅವನಿಗೆ ಲೂಟಿ ಚಪಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ ಸುರೇಶ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ರಾಮನಗರದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, `ಡಿಕೆಶಿ ತಮ್ಮ ಮೊನ್ನೆ ಏನೋ ಹೇಳವ್ನೆ, ನಮಗೆ ಮಾತನಾಡುವ ಚಪಲ ಅಂದವ್ನೆ’ ಹೌದು..ನನಗೆ ಮಾತಾಡುವ ಚಪಲ.
ಅವನಿಗೆ ಲೂಟಿ ಚಪಲ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ನನ್ನನ್ನು ರಾಮನಗರದಿಂದ ಯಾರೂ ಓಡಿಸಲು ಆಗಲ್ಲ. 2028ಕ್ಕೆ ಗೆದ್ದು ನಿಜವಾದ ರಾಮರಾಜ್ಯ ತರೋದು ಶತಸಿದ್ಧ ಎಂದು ಶಪಥ ಮಾಡಿದ್ದಾರೆ. ಡಿಕೆಶಿ ಜೊತೆ ಚರ್ಚೆ ಅನಾವಶ್ಯಕ. ನಾನು ಆ ವ್ಯಕ್ತಿ ಜೊತೆ ಹೋಲಿಕೆ ಮಾಡಿಕೊಳ್ಳಲ್ಲ. ಕಲ್ಲುಬಂಡೆ ಒಡೆದು ಜೀವನ ಮಾಡಿಲ್ಲ. ಯಾರ ಜಮೀನನ್ನೂ ಕಬಳಿಸಿಲ್ಲ ಎಂದ ವಾಗ್ದಾಳಿ ನಡೆಸಿದ್ದಾರೆ.
