ಉದಯವಾಹಿನಿ , ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತೆ? ನಾನು ಅಲ್ಲಿದ್ದಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು ದ್ರೋಹ ಮಾಡಿದ್ದೀನಿ ಎಂದು ಜೆಡಿಎಸ್‌ ನಾಯಕರಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಪ್ರಶ್ನಿಸಿದ್ದಾರೆ.

ಅರಸೀಕೆರೆಯಲ್ಲಿ ವಿದ್ಯುತ್‌ ಕೆಬಲ್‌ ಅಳವಡಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಈ ವೇಳೆ, ಕರ್ನಾಟಕ ರಾಜ್ಯದಲ್ಲಿ ನನ್ನದೇ ಆದ ವ್ಯಕ್ತಿತ್ವ ಇದೆ. ನಾನು ಬೆಳೆದಿದ್ದೀನಿ, ರಾಜಕೀಯ ಏನು ಅಂಥ ನನಗೆ ಗೊತ್ತಿದೆ. ನೀವು ಯಡಿಯೂರಪ್ಪರಿಗೆ ಮುಖ್ಯಮಂತ್ರಿ ಸ್ಥಾನ ಕೊಡ್ತಿನಿ ಅಂತ ಹೇಳಿ ಅಧಿಕಾರ ಕೊಟ್ರಾ? ಅವರಿಗೆ ಮೋಸ ಮಾಡಿದಂತೆ ಆಗಲಿಲ್ವಾ? ಎಂದು ಜೆಡಿಎಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜಕೀಯದಲ್ಲಿ ಇದೆಲ್ಲದೂ ಇದ್ದಿದ್ದೇ, ನಾನೇನ್ ಕೊಲೆ, ಮೋಸ ಮಾಡಿದ್ದೀನಾ? ನನ್ನನ್ನು ಬೈಯ್ಯಲು ಒಂದು ಸಮಾವೇಶ ಮಾಡಿದ್ರು. ಅದರಲ್ಲಿ ಗೌಡ್ರು ಅವರ ಮಕ್ಕಳು ಭಾಷಣ ಮಾಡಿದ್ರು. ಪಾಪ ಆ ಅಜ್ಜ ಬರಲಿ, ಅವರ ಬಗ್ಗೆ ಗೌರವವಿದೆ, ಅವರ ಬಗ್ಗೆ ನಾನು ಮಾತನಾಡಲ್ಲ. ನೀವು ನಿಮ್ಮ ಮನೆಯವರಿಗೆ ಎಲ್ಲಾ ಸ್ಥಾನ ಕೊಡ್ತಿದ್ರಿ ಅದಕ್ಕೆ ಪಕ್ಷ ಬಿಟ್ಟೆ. ನಾವು ಸಮಾವೇಶ ಮಾಡಿ ಬೈತಿನಿ. ಯಾರ‍್ಯಾರು ಏನೇನು ಮಾಡಿದ್ರು ಅವರು ಅನುಭವಿಸಿಕೊಳ್ತಾರೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!