ಉದಯವಾಹಿನಿ ಪೀಣ್ಯ ದಾಸರಹಳ್ಳಿ :  ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡಿನ ವ್ಯಾಪ್ತಿಗೆ ಬರುವ ಮಾರುತಿ ನಗರದ ಭೀಮ ಸಂದೇಶ ಕನ್ನಡ ಪತ್ರಿಕೆಯ ಸಂಪಾದಕ ವೈ ಜಿ ನರಸಿಂಹ ಮೂರ್ತಿ ಅವರ ನೇತೃತ್ವದಲ್ಲಿ  ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಹಾಗೂ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಮ್  ಮತ್ತು ವಿಶ್ವ ಪತ್ರಿಕಾ ದಿನಾಚರಣೆ ಆಯೋಜಿಸಲಾಗಿತ್ತು.ಇಂದು ಮಾಜಿ ಪಾಲಿಕೆ ಸದಸ್ಯ ಎಚ್ ಎನ್ ಗಂಗಾಧರ್ ಅವರಿಗೆ ಭೀಮ ಸಂದೇಶ ಕನ್ನಡ ಪತ್ರಿಕೆಯ ಸಂಪಾದಕ ವೈ ಜಿ ನರಸಿಂಹ ಮೂರ್ತಿ ಅವರ ಶಾಲು ಹೊದಿಸಿ ಮೈಸೂರು ಪೆಟೆ ಧರಿಸಿ ಫಲಪುಷ್ಪದೊಂದಿಗೆ ಗೌರವಿಸಿ ಡಾ.ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರ ಇರುವ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಡಾ. ಶಿವಕುಮಾರ್, ಅಂತಾರಾಷ್ಟ್ರೀಯ ಹಿಂದೂ ಪರಿಷತ್ ರಾಷ್ಟ್ರೀಯ ಬಜರಂಗದಳದ ಕಾರ್ಯಕರ್ತ ಶ್ರೀಕಾಂತ್ ಸೇರಿದಂತೆ  ಸೇರಿದಂತೆ ಹಲವಾರು ಜನರು ಇದ್ದರು.

Leave a Reply

Your email address will not be published. Required fields are marked *

error: Content is protected !!