ಉದಯವಾಹಿನಿ, ಬೆಂಗಳೂರು: ಮಾದಕ ವಸ್ತು ಜಾಲದ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿರುವ ಬಾಣಸವಾಡಿ ಪೊಲೀಸರು 1.5 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ ಮತ್ತು ಎಂಡಿಎಂಎ ಎಕ್ಸ್ಟೆಸ್ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ. ಎಚ್ಆರ್ಬಿಆರ್ ಬಡಾವಣೆ, ಕಲ್ಯಾಣ ನಗರದ ಸರ್ವೀಸ್ ರಸ್ತೆ ಬಳಿ ಇರುವ ಜಲ ಮಂಡಳಿ ಕಚೇರಿ ಕಾಂಪೌಂಡ್ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಬಾಣಸವಾಡಿ ಪೊಲೀಸರಿಗೆ ಮಾಹಿತಿ ಲಭಿಸಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆ ಸ್ಥಳಕ್ಕೆ ಹೋಗುತ್ತಿದ್ದಂತೆ ಪೊಲೀಸರನ್ನು ಕಂಡು ಆ ವ್ಯಕ್ತಿ ತಪ್ಪಿಸಿಕೊಂಡು ಬ್ಯಾಗ್ನಲ್ಲಿ ಮಾರಾಟ ಮಾಡಲು ತಂದಿದ್ದ ಮಾದಕ ವಸ್ತುವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಪೊಲೀಸರು ಬ್ಯಾಗ್ನ್ನು ಪರಿಶೀಲಿಸಿದಾಗ ಅದರಲ್ಲಿ ಮಾದಕ ವಸ್ತುಗಳು ಇರುವುದು ಕಂಡು ಬಂದಿದೆ.
ಬ್ಯಾಗ್ನಲ್ಲಿ 1 ಕೋಟಿ 50 ಲಕ್ಷ ರೂ. ಮೌಲ್ಯದ 1 ಕೆಜಿ ತೂಕದ ಎಂಡಿಎಂಎ ಕ್ರಿಸ್ಟಲ್ ಹಾಗೂ ಸುಮಾರು 300 ಗ್ರಾಂ ತೂಕದ ಎಕ್ಸ್ಟೆಸ್ ಟ್ಯಾಬ್ಲೆಟ್ಗಳನ್ನು ವಶಪಡಿಸಿಕೊಂಡಿರುತ್ತಾರೆ. ತಲೆಮರೆಸಿಕೊಂಡಿರುವ ಆರೋಪಿ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಳಿಸಿ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಪೂರ್ವ ವಿಭಾಗದ ಉಪಪೊಲೀಸ್ ಆಯುಕ್ತರಾದ ಡಾ. ಭೀಮಶಂಕರ ಗುಳೇದ ಅವರ ಮಾರ್ಗದರ್ಶನದಲ್ಲಿ ಬಾಣಸವಾಡಿ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಉಮಾಶಂಕರ್ ಅವರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿ ತಂಡ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಹಿರಿಯ ಅಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
