ಉದಯವಾಹಿನಿ, ಇಸ್ಲಾಮಾಬಾದ್: ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಫೆಬ್ರವರಿ 15 ರಂದು ಶ್ರೀಲಂಕಾದಲ್ಲಿ ನಡೆಯಲಿರುವ ಪಂದ್ಯದ ಬಗ್ಗೆ ದೇಶವು ಸ್ಪಷ್ಟ ನಿಲುವು ತೆಗೆದುಕೊಂಡಿದೆ ಎಂದು ಡಾನ್ ವರದಿ ಮಾಡಿದೆ. ಟಿ20 ವಿಶ್ವಕಪ್ಗೆ ಸಂಬಂಧಿಸಿದಂತೆ ನಾವು ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ ಎಂಬ ಸ್ಪಷ್ಟ ನಿಲುವನ್ನು ತೆಗೆದುಕೊಂಡಿದ್ದೇವೆ ಎಂದು ಪಾಕಿಸ್ತಾನ ಪ್ರಧಾನಿ ಇಸ್ಲಾಮಾಬಾದ್ನಲ್ಲಿ ಫೆಡರಲ್ ಕ್ಯಾಬಿನೆಟ್ ಉದ್ದೇಶಿಸಿ ಮಾತನಾಡುತ್ತಾ ಅವರು ಸ್ಪಷ್ಟಪಡಿಸಿದ್ದಾರೆ.
ಎಲ್ಲ ದೃಷ್ಟಿಯಿಂದ ಪರಾಮರ್ಶೆ ಮಾಡಿದ ನಂತರವೇ ಭಾರತದ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ಶೆಹಬಾಜ್ ಷರೀಫ್ ಹೇಳಿದ್ದಾರೆ. ಕ್ರೀಡೆಯಲ್ಲಿ ಯಾವುದೇ ರಾಜಕೀಯ ಇರಬಾರದು ಎಂದು ಅವರು ಹೇಳಿದರು. ನಾವು ಎಲ್ಲ ನಿಟ್ಟಿನಿಂದ ಚರ್ಚಿಸಿದ ಬಳಿಕವೇ ಈ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ. ಇದೊಂದು ಸೂಕ್ತ ನಿರ್ಧಾರ ಎಂದೂ ಕೂಡಾ ಅವರು ಬಣ್ಣಿಸಿದ್ದಾರೆ.
ಈ ಹಿಂದೆ, ಪಾಕಿಸ್ತಾನ ಸರ್ಕಾರವು ಯಾವುದೇ ಕಾರಣವನ್ನು ನೀಡದೇ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಅಂಗಳಕ್ಕೆ ಇಳಿಯುವುದಿಲ್ಲ ಎಂದು X ನಲ್ಲಿ ಪೋಸ್ಟ್ ಮಾಡಿತ್ತು. ಆ ಬಳಿಕ T20 ವಿಶ್ವಕಪ್ನಲ್ಲಿ ಭಾರತದ ವಿರುದ್ಧದ ಲೀಗ್ ಹಂತದ ಪಂದ್ಯಗಳನ್ನು ಬಹಿಷ್ಕರಿಸಲು ಪಾಕಿಸ್ತಾನ ನಿರ್ಧರಿಸಿತು.
ಪಾಕಿಸ್ತಾನ ಸರ್ಕಾರದ ನಿರ್ಧಾರದ ನಂತರ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಆಯ್ದ ಭಾಗವಹಿಸುವಿಕೆ, ಜಾಗತಿಕ ಕ್ರೀಡಾಕೂಟದ ಮೂಲ ನಿಯಮಕ್ಕೆ ಸರಿ ಹೊಂದುವುದಿಲ್ಲ. ಇದು ನ್ಯಾಯಯುತವಲ್ಲ ಮತ್ತು ಎಲ್ಲಾ ಪಾಲುದಾರರ ಹಿತಾಸಕ್ತಿಗಳನ್ನು ರಕ್ಷಿಸುವ ಪರಸ್ಪರ ಸ್ವೀಕಾರಾರ್ಹ ನಿರ್ಣಯವನ್ನು PCB ಅನ್ವೇಷಿಸುತ್ತದೆ ಎಂದು ನಿರೀಕ್ಷಿಸುತ್ತದೆ ಎಂದು ಹೇಳಿಕೆ ನೀಡಿತ್ತು. ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ರಲ್ಲಿ ಆಯ್ದವಾಗಿ ಭಾಗವಹಿಸುವಂತೆ ಸೂಚಿಸುವ ನಿರ್ಧಾರದ ಕುರಿತು ಪಾಕಿಸ್ತಾನ ಸರ್ಕಾರದ ಹೇಳಿಕೆಯನ್ನು ಗಮನಿಸಲಾಗಿದೆ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ (ಪಿಸಿಬಿ) ಅಧಿಕೃತ ಸಂವಹನಕ್ಕಾಗಿ ಐಸಿಸಿ ಕಾಯುತ್ತಿದ್ದರೂ, ಆಯ್ದ ಭಾಗವಹಿಸುವಿಕೆಯ ಈ ನಿಲುವು ಜಾಗತಿಕ ಕ್ರೀಡಾಕೂಟದ ಮೂಲಭೂತ ಆಧಾರದೊಂದಿಗೆ ಹೊಂದಾಣಿಕೆ ಮಾಡುವುದು ಕಷ್ಟ, ಅಲ್ಲಿ ಎಲ್ಲ ಅರ್ಹ ತಂಡಗಳು ಈವೆಂಟ್ ವೇಳಾಪಟ್ಟಿಯ ಪ್ರಕಾರ ಸಮಾನವಾಗಿ ಸ್ಪರ್ಧಿಸುವ ನಿರೀಕ್ಷೆಯಿದೆ ಎಂದು ಪ್ರಕಟಣೆ ತಿಳಿಸಿದೆ. ಐಸಿಸಿ ಪಂದ್ಯಾವಳಿಗಳು ಕ್ರೀಡಾ ಸಮಗ್ರತೆ, ಸ್ಪರ್ಧಾತ್ಮಕತೆ, ಸ್ಥಿರತೆ ಮತ್ತು ನ್ಯಾಯಸಮ್ಮತತೆಯ ಮೇಲೆ ನಿರ್ಮಿಸಲ್ಪಟ್ಟಿವೆ ಮತ್ತು ಆಯ್ದ ಭಾಗವಹಿಸುವಿಕೆಯು ಸ್ಪರ್ಧೆಗಳ ಉತ್ಸಾಹ ಮತ್ತು ಪವಿತ್ರತೆಯನ್ನು ಹಾಳು ಮಾಡುತ್ತದೆ ಎಂದು ಅದು ಹೇಳಿದೆ.
ಐಸಿಸಿ ಪುರುಷರ ಟಿ20 ವಿಶ್ವಕಪ್ ಯಶಸ್ವಿಯಾಗಿ ನಡೆಸುವುದು ಐಸಿಸಿಯ ಆದ್ಯತೆಯಾಗಿದ್ದು, ಇದು ಪಿಸಿಬಿ ಸೇರಿದಂತೆ ಅದರ ಎಲ್ಲಾ ಸದಸ್ಯರ ಜವಾಬ್ದಾರಿಯೂ ಆಗಿರಬೇಕು ಎಂದು ಅದು ಹೇಳಿದೆ. ಎಲ್ಲಾ ಪಾಲುದಾರರ ಹಿತಾಸಕ್ತಿಗಳನ್ನು ರಕ್ಷಿಸುವ ಪರಸ್ಪರ ಸ್ವೀಕಾರಾರ್ಹ ನಿರ್ಣಯವನ್ನು ಪಿಸಿಬಿ ಅನ್ವೇಷಿಸುತ್ತದೆ ಎಂದು ಅದು ನಿರೀಕ್ಷಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
