ಉದಯವಾಹಿನಿ, ನೆಲಮಂಗಲ: ಕೆನಡಾದಲ್ಲಿ ಕನ್ನಡಿಗನನ್ನು ಬರ್ಬರ ಕೊಲೆ ಮಾಡಲಾಗಿದೆ. ನೆಲಮಂಗಲ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್ (37) ಕಾರಿನಲ್ಲಿ ತೆರಳುತ್ತಿದ್ದಾಗ ಹತ್ತಾರು ಬಾರಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಕೆನಡಾದಲ್ಲಿ ಕನ್ನಡ ಡಿಂಡಿಮವನ್ನು ಸಾರುತ್ತಿದ್ದ ಚಂದನ್‌ ಕುಮಾರ್‌ ಎಲ್‌ಎನ್‌ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. 6 ವರ್ಷದಿಂದ ಕೆನಡಾದಲ್ಲಿದ್ದ ಚಂದನ್‌ ಅವರ ಪೋಷಕರಿಗೆ ನಿನ್ನೆ ಟೊರೊಂಟೋ ಪೊಲೀಸರು ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಮೃತ ಚಂದನ್ ತಂದೆ ನಿವೃತ್ತ ಶಿಕ್ಷಕ ನಂದ ಕುಮಾರ್  ಮಾತನಾಡಿ, ರಾತ್ರಿ 8 ಗಂಟೆಗೆ ಚಂದನ್‌ ಮೃತಪಟ್ಟಿದ್ದಾನೆ ಎಂಬ ಸುದ್ದಿ ಬಂತು. ಮೊನ್ನೆ ಶುಕ್ರವಾರ ಕಡೆಯದಾಗಿ ಮಾತನಾಡಿದ್ದ. ಹುಡುಗಿಯನ್ನು ನೋಡಿ ಮದುವೆ ಮಾಡುವ ಆಸೆ ಇತ್ತು. ಕೆಲಸದಿಂದ ರಜೆ ಪಡೆದು ಬರುತ್ತೇನೆ ಎಂದಿದ್ದ. ನನಗೆ ಏನು ಹೇಳಬೇಕು ಎನ್ನುವುದು ಗೊತ್ತಾಗುತ್ತಿಲ್ಲ. ಮಗನ ಮೃತ ದೇಹ ನಮ್ಮ ಮನೆಗೆ ಕರೆ ತರುವ ಕೆಲಸ ಮಾಡಿ ಎಂದು ಅವರು ಭಾರತ ಸರ್ಕಾರಕ್ಕೆ ಮನವಿ ಮಾಡಿದರು

 

Leave a Reply

Your email address will not be published. Required fields are marked *

error: Content is protected !!