ಉದಯವಾಹಿನಿ, ಬಳ್ಳಾರಿ: ಫೆ.13 ರಿಂದ 15ರ ವರೆಗೆ ಮೂರು ದಿನಗಳ ಕಾಲ ಹಂಪಿ ಉತ್ಸವದ ಹಿನ್ನೆಲೆ ಹಂಪಿಯ ತುಂಗಭದ್ರಾ ನದಿಯ ದಡದಲ್ಲಿ ಅದ್ಧೂರಿಯಾಗಿ ತುಂಗಭದ್ರಾ ಆರತಿ ನೆರೆವೇರಿಸಲಾಯಿತು.

ಅರ್ಚಕರು ಸಾಲಾಗಿ ನಿಂತು, ಮಂತ್ರಘೋಷಗಳ ನಡುವೆ ದೊಡ್ಡದಾದ ಕಂಚಿನ ದೀಪಗಳಿಂದ ನದಿಗೆ ಆರತಿ ಬೆಳಗಿದರು. ನದಿಯ ನೀರಿನಲ್ಲಿ ಪ್ರತಿಫಲಿಸುವ ದೀಪದ ಬೆಳಕು, ಮಂತ್ರಗಳ ಪಠಣ ಮತ್ತು ಶಂಖನಾದವು ಭಕ್ತರಲ್ಲಿ ಹಾಗೂ ಪ್ರವಾಸಿಗರಲ್ಲಿ ಭಕ್ತಿಭಾವ ಮೂಡಿಸಿತು.

ದೇಶ – ವಿದೇಶಗಳ ಸಾವಿರಾರು ಪ್ರವಾಸಿಗರು ತುಂಗಭದ್ರಾ ಆರತಿಯನ್ನು ಕಣ್ತುಂಬಿಕೊಂಡರು. ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್, ಮಾಜಿ ಶಾಸಕ ಭೀಮಾನಾಯ್ಕ್, ಡಿಸಿ ಕವಿತಾ ಮನ್ನಿಕೇರಿ, ಎಸ್‌ಪಿ ಜಾಹ್ನವಿ, ಸಿಇಒ ಅಕ್ರಂ ಷಾ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!