ಉದಯವಾಹಿನಿ, ಹಾಸನ: ತುಮಕೂರು ಜಿಲ್ಲೆ, ಕುಣಿಗಲ್ ತಾಲ್ಲೂಕಿನ, ಯಲಿಯೂರು ಗ್ರಾಮದಿಂದ ಚಿಕ್ಕಮಗಳೂರಿಗೆ ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದಲ್ಲಿ ನಡೆದಿದೆ.
ಬೇಲೂರು ತಾಲೂಕಿನ, ಮತ್ತಾವರ ಗ್ರಾಮದ ಮಹಿಳೆ ಪ್ರಿಯಾಂಕ (29) ಕಾಣಿಯಾಗಿರುವ ಮಹಿಳೆ. ಹಾಸನ ತಾಲೂಕಿನ, ಕಲ್ಕೆರೆ ಗ್ರಾಮದ ಬಳಿ ಮಹಿಳೆಯ ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿದ್ದು, ಕೊಲೆ ಮಾಡಿ ಸಮೀಪದಲ್ಲಿರುವ ಕೆರೆಗೆ ಶವ ಎಸೆದಿರುವ ಅನುಮಾನದ ಮೇರೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಸ್ಥಳಕ್ಕೆ ಎಸ್ಪಿ ಶುಭನಿತ್ವಾ, ಸೋಕೋ ತಂಡ, ಡಾಗ್ ಸ್ಕಾö್ಯಡ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಹತ್ತು ವರ್ಷಗಳ ಹಿಂದೆ ಪ್ರಿಯಾಂಕ ಯಲಿಯೂರು ಗ್ರಾಮದ ರುದ್ರೇಶ್ ಅವರೊಂದಿಗೆ ವಿವಾಹವಾಗಿದ್ದು, ಒಬ್ಬ ಗಂಡು ಮಗನಿದ್ದಾನೆ. ಫೆಬ್ರವರಿ 12ರಂದು ಚಿಕ್ಕಮಗಳೂರಿನ ಮದುವೆ ಕಾರ್ಯಕ್ರಮಕ್ಕೆ ಪ್ರಿಯಾಂಕ ಆಗಮಿಸಿದ್ದರು. ಮದುವೆ ಮುಗಿಸಿ ತವರು ಮನೆ ಮತ್ತಾವರ ಗ್ರಾಮಕ್ಕೆ ಬಂದು, ಕೆಲ ಸಮಯ ಕಳೆದು ನಂತರ ತಾಯಿ ಜೊತೆ ಕೈಮರ ಗ್ರಾಮಕ್ಕೆ ಬಂದು ಬೇಲೂರಿಗೆ ಬಸ್ ಹತ್ತಿದ್ದಾರೆ. ಬಳಿಕ ಬೇಲೂರಿನಲ್ಲಿ ಬಸ್ ಇಳಿದು ತನ್ನ ಚಿಕ್ಕಮ್ಮ ಸೌಮ್ಯಾ ಅವರಿಗೆ ಕರೆ ಮಾಡಿ ಪರಿಚಯಸ್ಥರು ಸಿಕ್ಕಿದ್ದಾರೆ. ಅವರ ಜೊತೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ. ಇದಕ್ಕೂ ಮೊದಲು ಪತಿ ರುದ್ರೇಶ್ಗೂ ಕರೆ ಮಾಡಿದ್ದ ಪ್ರಿಯಾಂಕ ಕುಣಿಗಲ್ಗೆ ಬಂದು ಕರೆದುಕೊಂಡು ಹೋಗಿ ಎಂದಿದ್ದರಂತೆ. ಆದಾದ ಬಳಿಕ ಸೌಮ್ಯ ರಾತ್ರಿ 8:30ರ ಸಮಯದಲ್ಲಿ ಪ್ರಿಯಾಂಕಗೆ ಕರೆ ಮಾಡಿದ್ದು, ಫೋನ್ ಸ್ವಿಚ್ ಆಫ್ ಆಗಿದೆ.
