ಉದಯವಾಹಿನಿ, ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಗುರುವೈಭವೋತ್ಸವ ಸಂಭ್ರಮ ಮನೆ ಮಾಡಿದ್ದು, ತಿರುಮಲ ತಿರುಪತಿ ದೇವಸ್ಥಾನದಿಂದ ಮಂತ್ರಾಲಯಕ್ಕೆ ಬಂದ ಶ್ರೀನಿವಾಸ ದೇವರ ಶೇಷವಸ್ತ್ರವನ್ನ ರಾಯರಿಗೆ ಸಮರ್ಪಿಸಲಾಯಿತು. ಈ ವೇಳೆ ಹೆಚ್‌ಡಿಕೆ ದಂಪತಿ ಭಾಗಿಯಾಗಿದ್ದರು. ಶೇಷ ವಸ್ತ್ರವನ್ನ ತಂದ ತಿರುಮಲ ತಿರುಪತಿ ದೇವಸ್ಥಾನದ ಅಧಿಕಾರಿಗಳನ್ನ ಸಾಂಪ್ರದಾಯಿಕವಾಗಿ ರಾಯರ ಮಠದ ಆಡಳಿತ ಮಂಡಳಿ ಸ್ವಾಗತಿಸಿತು. ಮೆರವಣಿಗೆಯಲ್ಲಿ ಮಠಕ್ಕೆ ತಂದ ಶೇಷವಸ್ತ್ರವನ್ನ ರಾಯರ ಮೂಲ ಬೃಂದಾವನಕ್ಕೆ ಸಮರ್ಪಣೆ ಮಾಡಲಾಯಿತು. ಮಂತ್ರಾಲಯ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಶೇಷವಸ್ತ್ರವನ್ನ ರಾಯರ ಬೃಂದಾವನಕ್ಕೆ ಸಮರ್ಪಿಸಿದರು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು. ಶೇಷವಸ್ತ್ರ ಸಮರ್ಪಣೆ ಕಾರ್ಯಕ್ರಮದಲ್ಲಿ ಹೆಚ್‌ಡಿಕೆ ದಂಪತಿ ಭಾಗಿಯಾಗಿದ್ದರು.

 

Leave a Reply

Your email address will not be published. Required fields are marked *

error: Content is protected !!