ಉದಯವಾಹಿನಿ, ಟೆಹ್ರಾನ್‌: ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯರು ಕೂಡಲೇ ದೇಶ ತೊರೆಯುವಂತೆ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ. ಇರಾನ್‌ನಲ್ಲಿರುವ (Iran) ಎಲ್ಲಾ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು , ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಯಾವುದೇ ಸಾರಿಗೆ ವ್ಯವಸ್ಥೆ ಬಳಸಿಕೊಂಡು ಕೂಡಲೇ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ. ಇರಾನ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರ ಜ.5 ರಂದು ಹೊರಡಿಸಿದ್ದ ಸಲಹೆಯ ಮುಂದುವರಿದ ಭಾಗವಾಗಿ ಸೂಚನೆ ಹೊರಡಿಸಿದೆ. ಎಲ್ಲಾ ಭಾರತೀಯರು ಹಾಗೂ ಭಾರತೀಯ ಮೂಲದವರು ಎಚ್ಚರಿಕೆ ವಹಿಸಬೇಕು. ಪ್ರತಿಭಟನೆಗಳು ನಡೆಯುವ ಸ್ಥಳಗಳಿಂದ ದೂರವಿರಬೇಕು, ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಬೇಕೆಂದು ಸೂಚಿಸಿದೆ.

ಅಲ್ಲದೇ ಬೆಳವಣಿಗೆ ತಿಳಿಯಲು ಸ್ಥಳೀಯ ಮಾಧ್ಯಮಗಳ ಮೇಲೆ ಗಮನ ಹರಿಸಿ. ಯಾವುದೇ ಕ್ಷಣದಲ್ಲೂ ನಿಮ್ಮ ಪಾಸ್‌ಪೋರ್ಟ್‌, ಇತರ ಪ್ರಯಾಣ ದಾಖಲೆಗಳನ್ನ ಸಿದ್ಧವಾಗಿಟ್ಟುಕೊಳ್ಳಿ. ಒಂದು ವೇಳೆ ರಾಯಭಾರ ಕಚೇರಿಯಲ್ಲಿ ನೋಂದಾಯಿಸದವರು ಆನ್‌ಲೈನ್‌ ಪೋರ್ಟಲ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!