ಉದಯವಾಹಿನಿ, ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಶಾಸ್ತ್ರಗಳು ಆರಂಭ ಆಗಿವೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಈ ವಿವಾಹದಲ್ಲಿ ಭಾಗಿ ಆಗಿದ್ದಾರೆ. ಮದುವೆಗೂ ಮುನ್ನ ಅನೇಕ ಶಾಸ್ತ್ರಗಳನ್ನು ಮಾಡಲಾಗಿದೆ. ಬುಧವಾರ ಹಳದಿ ಶಾಸ್ತ್ರ ಮಾಡಲಾಗುತ್ತಿದೆ. ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ಆಶಿಕಾ ರಂಗನಾಥ್ ಅವರು ಹಳದಿ ಶಾಸ್ತ್ರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬಹಳ ಅದ್ದೂರಿಯಾಗಿ ವಿರೋಶ್ ಮದುವೆ ನಡೆಯುತ್ತಿದೆ.

ಕನ್ನಡ ಚಿತ್ರರಂಗದ ಕೆಲವೇ ಮಂದಿಗೆ ಮಾತ್ರ ರಶ್ಮಿಕಾ ಮಂದಣ್ಣ ಅವರು ಮದುವೆಯ ಆಹ್ವಾನ ನೀಡಿದ್ದಾರೆ. ವೃತ್ತಿಜೀವನದ ಆರಂಭದ ದಿನಗಳಿಂದ ರಶ್ಮಿಕಾ ಮಂದಣ್ಣ ಮತ್ತು ಆಶಿಕಾ ರಂಗನಾಥ್ ಅವರು ಸ್ನೇಹ ಹೊಂದಿದ್ದಾರೆ. ಹಾಗಾಗಿ ಆಶಿಕಾ ರಂಗನಾಥ್ ಅವರನ್ನು ಆಹ್ವಾನಿಸಲಾಗಿದೆ. ಸಿನಿಮಾ ಕೆಲಸಗಳಿಗೆ ಬಿಡುವು ನೀಡಿದ ಆಶಿಕಾ ಅವರು ಗೆಳತಿಯ ಮದುವೆಗಾಗಿ ಉದಯಪುರಕ್ಕೆ ತೆರಳಿದ್ದಾರೆ.ಹಳದಿ ಶಾಸ್ತ್ರಕ್ಕೆ ಯಾವ ರೀತಿ ತಯಾರಿ ನಡೆದಿದೆ ಎಂಬುದನ್ನು ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಈ ಫೋಟೋಗಳ ಮೂಲಕ ತಿಳಿಸಿದ್ದಾರೆ. ಆಶಿಕಾ ರಂಗನಾಥ್ ಕೂಡ ತಾವು ಹಳದಿ ಶಾಸ್ತ್ರಕ್ಕೆ ಸಜ್ಜಾಗಿ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಮದುವೆ ಬಗ್ಗೆ ಕ್ಷಣಕ್ಷಣದ ಅಪ್​ಡೇಟ್ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ತೆಲುಗಿನಲ್ಲಿ ಮಾತ್ರವಲ್ಲದೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಹೊಂದಿದ್ದಾರೆ. ತಮ್ಮ ಮದುವೆಗೆ ಕೇವಲ 100 ಜನರಿಗೆ ಮಾತ್ರ ಅವರು ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ನಡೆಯಲಿರುವ ಆರತಕ್ಷತೆ ಕಾರ್ಯಕ್ರಮದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆ ಇದೆ.

Leave a Reply

Your email address will not be published. Required fields are marked *

error: Content is protected !!