ಉದಯವಾಹಿನಿ, ಡಿವೋರ್ಸ್ ಮಧ್ಯೆ ವಿಜಯ್ ಮತ್ತು ತ್ರಿಶಾ ಇದೀಗ ಒಂದೇ ಬಣ್ಣದ ಉಡುಗೆಯಲ್ಲಿ ಆರತಕ್ಷತೆಯೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಚೆನ್ನೈನಲ್ಲಿ ನಿರ್ಮಾಪಕ ಕಲ್ಪತಿ ಎಸ್ ಸುರೇಶ್ ಮತ್ತು ಮೀನಾಕ್ಷಿ ಸುರೇಶ್ ಅವರ ಪುತ್ರನ ಮದುವೆಯ ಆರತಕ್ಷತೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಮತ್ತು ತ್ರಿಶಾ ಒಟ್ಟಿಗೆ ಒಂದೇ ಬಣ್ಣದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೇ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಕೌಟುಂಬಿಕ ನ್ಯಾಯಾಲಯದಲ್ಲಿ ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ನಟಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ಮೊದಲ ಬಾರಿಗೆ ವಿಜಯ್ ಹಾಗೂ ತ್ರಿಶಾ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
