ಉದಯವಾಹಿನಿ, ಬೆಂಗಳೂರು: ಹೋಟೆಲ್ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್ಗಳು ಸಹಿಸಿಕೊಳ್ಳಬೇಕು ಅಂತ ಸಚಿವ ಮುನಿಯಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಬಗ್ಗೆ ಕಾಂಗ್ರೆಸ್ ಸದಸ್ಯರಾದ ಐವಾನ್ ಡಿಸೋಜ ಮತ್ತು ನಾಗರಾಜ್ ಯಾದವ್ ವಿಷಯ ಪ್ರಸ್ತಾಪ ಮಾಡಿದರು. ಆಟೋ, ಹೋಟೆಲ್ಗಳಿಗೆ ಗ್ಯಾಸ್ ಸಿಕ್ತಿಲ್ಲ. ಗ್ಯಾಸ್ ಕಾಳಸಂತೆಯಲ್ಲಿ ಮಾರಾಟ ಆಗ್ತಿದೆ. ಹೋಟೆಲ್ನಲ್ಲಿ ತಿಂಡಿ, ಊಟ ಸಮಸ್ಯೆ ಆಗ್ತಿದೆ. ಗ್ಯಾಸ್ ರೇಟ್ ಏರಿಕೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸುದ್ದಿ ಆಗ್ತಿದೆ. ಈ ಬಗ್ಗೆ ತನಿಖೆ ಆಗಬೇಕು ಅಂತ ಮನವಿ ಮಾಡಿದ್ದಾರೆ.
ವಿಶ್ವವಿದ್ಯಾಲಯಗಳಲ್ಲಿ ಗ್ಯಾಸ್ನಿಂದ ಊಟ ಕೊಡಲು ಆಗ್ತಿಲ್ಲ. ಹೀಗಾಗಿ- ಗ್ಯಾಸ್ ಸಮಸ್ಯೆ ಮುಗಿಯೋವರೆಗೂ ವಿವಿಗಳಿಗೆ ರಜೆ ಕೊಡಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಇಂದಿರಾ ಕ್ಯಾಂಟೀನ್, ಆಸ್ಪತ್ರೆಗಳಲ್ಲಿ ಸಮಸ್ಯೆ ಆಗಿದೆ. ಮದುವೆಗಳು ನಿಂತಿವೆ. ದೇವಸ್ಥಾನದಲ್ಲಿ ಪ್ರಸಾದ ಸಿಕ್ತಿಲ್ಲ. ರಾಜ್ಯ ಸರ್ಕಾರ ಗ್ಯಾಸ್ ಸಮಸ್ಯೆಗೆ ಕ್ರಮ ತಗೋಬೇಕು ಅಂತ ಒತ್ತಾಯ ಮಾಡಿದ್ದಾರೆ. ಇದಕ್ಕೆ ಸಚಿವ ಮುನಿಯಪ್ಪ ಉತ್ತರ ನೀಡಿ, ಇಂದು ಕೂಡ ಆಯಿಲ್ ಕಂಪನಿ ಜೊತೆ ಮಾತುಕತೆ ಮಾಡಿದ್ದೇನೆ. ಆಸ್ಪತ್ರೆ, ಹಾಸ್ಟೆಲ್, ವಸತಿ ನಿಲಯಕ್ಕೆ ಕಮರ್ಷಿಯಲ್ ಗ್ಯಾಸ್ ಕೊಡ್ತೀವಿ. ಈಗ ತಕ್ಷಣಕ್ಕೆ ಸಮಸ್ಯೆ ಆಗಿದೆ. ಒಂದು ವಾರದಲ್ಲಿ ಸಮಸ್ಯೆ ಪರಿಹಾರ ಆಗಲಿದೆ. ಹೋಟೆಲ್ ಅವರಿಗೆ ಎಲೆಕ್ಟ್ರಿಕ್ ಸ್ಟೌವ್ ಬಳಕೆ ಮಾಡಿ ಅಂತ ಮನವಿ ಮಾಡಿದ್ದೇವೆ. ಹೋಟೆಲ್ ಅವರು ಒಂದು ವಾರ ಸಹಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
