ಉದಯವಾಹಿನಿ, ಬೆಂಗಳೂರು: ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬೆಳಗಾವಿ ಜಿಲ್ಲೆಯ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಅಂಬೋಲಿ ಗ್ರಾಮದ ಅರಣ್ಯ ಪ್ರದೇಶದಲ್ಲಿನ ಪ್ರಾಯೋಗಿಕ ಬಾಂಬ್ ಸೋಟದ ಕುರಿತು ಶಂಕಿತ ಭಯೋತ್ಪಾದಕರನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದು, ಉಗ್ರರ ಪಿತೂರಿಯ ವಿವರಗಳನ್ನು ಸಂಗ್ರಹಿಸಿದ್ದಾರೆ.
ಪುಣೆಯ ಎಟಿಎಸ್ ಅಧಿಕಾರಿಗಳು ಮೊಹಮ್ಮದ್ ಇಮ್ರಾನ್ ಅಲಿಯಾಸ್ ಅಮೀರ್ ಅಬ್ದುಲ್ ಹಮೀದ್ ಖಾನ್, ಮೊಹಮ್ಮದ್ ಯೂನಿಸ್, ಮೊಹಮ್ಮದ್ ಯಾಕೂಬ್ ಸಾಕಿ ಎಂಬ ಶಂಕಿತ ಉಗ್ರರನ್ನು ಬಂಧಿಸಿದ್ದು, ಎಟಿಎಸ್ ತಂಡ ನಿಪ್ಪಾಣಿ ಮತ್ತು ಬೆಳಗಾವಿಯ ಸಂಕೇಶ್ವರಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ ಎನ್ನಲಾಗಿದೆ.
ಪುಣೆಯ ಕೊತ್ರುಡ್ ಪ್ರದೇಶದ ಪೊಲೀಸರು ಶಂಕಿತ ಉಗ್ರರನ್ನು ಬೈಕ್ ಕಳ್ಳರೆಂದು ಭಾವಿಸಿ ಬಂಧಿಸಿದ್ದರು. ಆದರೆ ವಿಚಾರಣೆ ವೇಳೆ, ಈ ಶಂಕಿತರು ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿತ್ತು. ನಂತರ ಅವರನ್ನು ಮಹಾರಾಷ್ಟ್ರ ಎಟಿಎಸ್ ವಶಕ್ಕೆ ತೆಗೆದುಕೊಂಡಿದೆ. ಅಂಬೋಲಿ ಗ್ರಾಮದ ದಟ್ಟ ಅರಣ್ಯದಲ್ಲಿ ಪ್ರಾಯೋಗಿಕ ಸೋಟ ನಡೆಸಿರುವುದಾಗಿ ಅವರು ತನಿಖಾಕಾರಿಗಳಿಗೆ ತಿಳಿಸಿದ್ದಾರೆ.
