ಉದಯವಾಹಿನಿ, ದಾವಣಗೆರೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆಯ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ಎರಡೂ ಕ್ಷೇತ್ರಗಳಿಗೆ ಏಪ್ರಿಲ್‌ 9 ರಂದು ಚುನಾವಣೆ ನಡೆದರೆ ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರು ಇಂದು ದೆಹಲಿಯಲ್ಲಿ ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ, ಪುದುಚ್ಚೇರಿ ವಿಧಾನಸಭಾ ಚುನಾವಣಾ ದಿನಾಂಕದ ಜೊತೆ ಗೋವಾ, ಗುಜರಾತ್‌, ಮಹಾರಾಷ್ಟ್ರ, ನಾಗಾಲ್ಯಾಂಡ್‌, ತ್ರಿಪುರ ಉಪಚುನಾವಣಾ ದಿನಾಂಕವನ್ನು ಪ್ರಕಟಿಸಿದರು. ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಕ್ಕೆ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಚುನಾವಣೆ ನಡೆದರೆ, ಕಾಂಗ್ರೆಸ್‌ ಶಾಸಕ ಹೆಚ್‌ವೈ ಮೇಟಿ ನಿಧನರಾಗಿದ್ದಕ್ಕೆ ಬಾಗಲಕೋಟೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

 

Leave a Reply

Your email address will not be published. Required fields are marked *

error: Content is protected !!