ಉದಯವಾಹಿನಿ, ಕಾಬೂಲ್: ಆಸ್ಪತ್ರೆ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ದಾಳಿಯನ್ನು ಅಫ್ಘಾನಿಸ್ತಾನ ಕ್ರಿಕೆಟ್ ಆಟಗಾರರು ಖಂಡಿಸಿದ್ದಾರೆ. ಪಾಕಿಸ್ತಾನ ಸೇನೆಯಿಂದ ಹತ್ಯೆ ನಡೆದಿದೆ ಎಂದು ರಶೀದ್ ಖಾನ್ ಕಿಡಿಕಾರಿದ್ದಾರೆ. ಪವಿತ್ರ ರಂಜಾನ್ ತಿಂಗಳಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯ ಪರಿಣಾಮವಾಗಿ ಸಂಭವಿಸಿದ ಜೀವಹಾನಿಗೆ ಅಫ್ಘಾನಿಸ್ತಾನ ಕ್ರಿಕೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಬೂಲ್ನಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಉಂಟಾದ ನಾಗರಿಕರ ಸಾವು-ನೋವುಗಳಿಂದ ನಾನು ತೀವ್ರವಾಗಿ ದುಃಖಿತನಾಗಿದ್ದೇನೆ. ನಾಗರಿಕರ ಮನೆಗಳು, ಶೈಕ್ಷಣಿಕ ಸೌಲಭ್ಯಗಳು ಅಥವಾ ವೈದ್ಯಕೀಯ ಮೂಲಸೌಕರ್ಯಗಳನ್ನು ಟಾರ್ಗೆಟ್ ಮಾಡುವುದು ತಪ್ಪು. ಇದು ಯುದ್ಧಾಪರಾಧ ಎಂದು ರಶೀದ್ ಖಾನ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪವಿತ್ರ ರಂಜಾನ್ ತಿಂಗಳಲ್ಲಿ ಜೀವಗಳ ವಿರುದ್ಧ ಅಮಾನವೀಯವಾಗಿ ನಡೆದುಕೊಳ್ಳುವುದು ಅಸಹ್ಯಕರ ಮತ್ತು ತೀವ್ರ ಕಳವಳಕಾರಿ. ಈ ನಡೆ ವಿಭಜನೆ ಮತ್ತು ದ್ವೇಷವನ್ನು ಹೆಚ್ಚಿಸುತ್ತದೆ. ದೌರ್ಜನ್ಯವನ್ನು ಕೂಲಂಕಷವಾಗಿ ತನಿಖೆ ಮಾಡಿ ಅಪರಾಧಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ವಿಶ್ವಸಂಸ್ಥೆ ಮತ್ತು ಮಾನವ ಹಕ್ಕು ಸಂಸ್ಥೆಗಳಿಗೆ ಮನವಿ ಮಾಡುತ್ತಾನೆ. ಈ ಕಷ್ಟದ ಸಮಯದಲ್ಲಿ ನಾನು ನನ್ನ ಆಫ್ಘನ್ ಜನರೊಂದಿಗೆ ನಿಲ್ಲುತ್ತೇನೆ ಎಂದು ರಶೀದ್ ಖಾನ್ ತಿಳಿಸಿದ್ದಾರೆ.
