ಉದಯವಾಹಿನಿ, ಬೆಂಗಳೂರು: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಮೂಲ ಸೌಕರ್ಯಗಳ ಕೊರತೆ, ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ನಡೆದಿದೆ ಅಂತ ಆರೋಪಿಸಿ ಎಬಿವಿಪಿ ಸಂಘಟನೆ ಜೊತೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ಉಪ ಕುಲಪತಿಗಳ ಕಚೇರಿ ಮುಂದೆ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ವಿವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಇನ್ವೈಟಿ ಟ್ಯಾಕ್ಸ್ ಕಾರ್ಯಕ್ರಮದ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ. ಸುಮಾರು 1 ಕೋಟಿ ರೂಪಾಯಿ ಹಗರಣ ನಡೆದಿದೆ ಅಂತ ವಿದ್ಯಾರ್ಥಿಗಳು ಆರೋಪಿಸಿದರು.ಈ ಬಗ್ಗೆ ಲೋಕಾಯುಕ್ತ ತನಿಖೆ ಮಾಡಬೇಕು ಅಂತ ಒತ್ತಾಯ ಮಾಡಿದ್ರು. ಕ್ಯಾಂಪಸ್‌ನಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಕುಡಿಯುವ ನೀರು, ಶೌಚಾಲಯ, ಫ್ಯಾನ್, ಸಿಸಿ ಟಿವಿ ವ್ಯವಸ್ಥೆ ಇಲ್ಲ. ಉಪನ್ಯಾಸಕರು ಇಲ್ಲ. ಇದರಿಂದ ವಿದ್ಯಾರ್ಥಿನಿಯರಿಗೆ ಸಮಸ್ಯೆ ಆಗ್ತಿದೆ ಅಂತ ತಿಳಿಸಿದರು.

ಉಪ ಕುಲಪತಿಗಳ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಉಪ ಕುಲಪತಿಗಳು ಒಂದು ವಾರದೊಳಗೆ ಮೂಲಭೂತ ಸೌಕರ್ಯಗಳನ್ನ ಒದಗಿಸೋ ಭರವಸೆ ಕೊಟ್ಟರು. ಒಂದು ವಾರದಲ್ಲಿ ಸಮಸ್ಯೆ ಬಗೆಹರಿಯದೇ ಹೋದ್ರೆ ಮತ್ತೆ ಪ್ರತಿಭಟನೆ ಮಾಡೋ ಎಚ್ಚರಿಕೆ ಎಬಿವಿಪಿ ಕೊಟ್ಟಿದೆ.

Leave a Reply

Your email address will not be published. Required fields are marked *

error: Content is protected !!