
ಉದಯವಾಹಿನಿ,ಚಿಂಚೋಳಿ: ಧಾರಾಕಾರ ಸುರಿದ ಅತಿವೃಷ್ಟಿ ಮಳೆಯಿಂದ ಹಾನಿಯಾದ ಬೆಳೆಗಳಿಗೆ ಅಣೆವಾರು ಪರಿಹಾರ ಘೋಷಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪಾ ಮಮಶೇಟ್ಟಿ ಆಗ್ರಹಿಸಿದರು.ಪಟ್ಟಣದ ತಹಸೀಲ್ ಕಛೇರಿ ಎದುರು ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಜಂಟಿಯಾಗಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿ ಮಾತನಾಡಿದ ಅವರು,ಜುಲೈ ತಿಂಗಳಲ್ಲಿ ಧಾರಾಕಾರ ಮಳೆ ಸುರಿದು ಅತಿವೃಷ್ಟಿ ಮಳೆಯಿಂದ ರೈತರು ಬೆಳೆದಿರುವ ಬೆಳೆಗಳಾದ ತೊಗರಿ,ಉದ್ದು,ಹೆಸರು,ಸೋಯಾಬಿನ್,ಎಳ್ ಳು ಹಾನಿಯಾಗಿದ್ದು ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲಾ ಎಂಬಂತೆ ಆಗಿದ್ದು ರೈತರು ಸಾಲದಲ್ಲಿ ಒದ್ದಾಡುತ್ತಿದ್ದಾರೆ.
ಸರ್ಕಾರ ತಕ್ಷಣ ಅತಿವೃಷ್ಟಿ ಬೆಳೆಹಾನಿಯನ್ನು ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿಯಾಗಿ ಸರ್ವೇ ನಡೆಸಿ ಪರಿಹಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ನಿವೃತ್ತ ನ್ಯಾಯಾಧೀಶ ಜೆ.ಕೆ ಗೋಖಲೆ,ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ಭೀಮಶೇಟ್ಟಿ ಯಂಪಳ್ಳಿ,ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕಾ ಅಧ್ಯಕ್ಷ ಜಾಫರ್ ಖಾನ್,ಮಲ್ಲಮ್ಮಾ ಮೋಘಾ,ಪ್ರದೀಪಕುಮಾರ,ಅನೇಕ ರೈತರು ಇದ್ದರು.
