ಉದಯವಾಹಿನಿ, ಭಾರತೀಯ ಸಿನಿರಂಗದಲ್ಲಿ ಈಗ ಹೆಚ್ಚು ಚರ್ಚೆಗೆ ಗ್ರಾಸವಾಗಿರುವ ಚಿತ್ರಗಳಲ್ಲಿ ರಾಮಾಯಣ ಒಂದು. ಅದರಲ್ಲೂ ರಾವಣನ ಪಾತ್ರದಲ್ಲಿ ಯಶ್ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶಾದ್ಯಂತ ಮಾತ್ರವಲ್ಲ, ವಿದೇಶಗಳಲ್ಲೂ ಈ ಚಿತ್ರದ ಬಗ್ಗೆ ಭಾರೀ ಕುತೂಹಲ ಮೂಡಿದೆ. ಇತ್ತೀಚಿನ ಹೊಸ ಅಪ್ಪೇಟ್ ಸಿನಿಮಾ ಪ್ರೇಮಿಗಳಿಗೆ ಮತ್ತಷ್ಟು ಖುಷಿ ನೀಡಿದೆ.
ಈ ಚಿತ್ರದಲ್ಲಿ ರಾಮನ ಪಾತ್ರವನ್ನು ರಣಬೀರ್ ಕಪೂರ್, ಸೀತೆಯ ಪಾತ್ರವನ್ನು ಸಾಯಿ ಪಲ್ಲವಿ ಮತ್ತು ರಾವಣನ ಪಾತ್ರವನ್ನು ಯಶ್ ನಿರ್ವಹಿಸುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಜೊತೆಗೆ ಹನುಮಂತನಾಗಿ ಸನ್ನಿ ಡಿಯೋಲ್ ಕಾಣಿಸಿಕೊಳ್ಳಲಿದ್ದು, ಶೂರ್ಪಣಖಿ ಪಾತ್ರದಲ್ಲಿ ರಾಕುಲ್ ಪ್ರೀತ್ ಸಿಂಗ್ ನಟಿಸಲಿದ್ದಾರೆ.
ಇತ್ತೀಚೆಗೆ ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ನಡೆದ 2026 ಕಾರ್ಯಕ್ರಮದಲ್ಲಿ ಯಶ್ ಭಾಗವಹಿಸಿರುವುದು ಚಿತ್ರದ ಬಗ್ಗೆ ಮತ್ತಷ್ಟು ಹೈಪ್ ಸೃಷ್ಟಿಸಿದೆ. ಈ ವೇಳೆ ಅವರು ಚಿತ್ರದ ನಿರ್ಮಾಣದ ಬಗ್ಗೆ ಮಾತನಾಡಿ, ‘ರಾಮಾಯಣ’ ದಂತಹ ಮಹಾಕಾವ್ಯವನ್ನು ಚಿತ್ರರೂಪಕ್ಕೆ ತರುವುದು ದೊಡ್ಡ ಸವಾಲಾದರೂ, ತಂಡದ ಎಲ್ಲರ ಗುರಿ ಒಂದೇ – ಅತ್ಯುತ್ತಮ ಚಿತ್ರವನ್ನು ಪ್ರೇಕ್ಷಕರಿಗೆ ನೀಡುವುದು ಎಂದರು. ಜೊತೆಗೆ ರಾಮಾಯಣ ಈ ವರ್ಷ ಅಕ್ಟೋಬರ್ನಲ್ಲಿ ರಿಲೀಸ್ ಆಗಲಿದೆ ಎಂದು ಹೇಳಿದ್ದಾರೆ.
