ಉದಯವಾಹಿನಿ, ಡೆಹ್ರಾಡೂನ್: ಆರು ತಿಂಗಳ ಚಳಿಗಾಲದ ವಿರಾಮದ ನಂತರ ಅಕ್ಷಯ ತೃತೀಯ ಸಂದರ್ಭದಲ್ಲಿ ಉತ್ತರಾಖಂಡದ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ ದ್ವಾರಗಳು ತೆರೆದಿದ್ದು, ಚಾರ್ ಧಾಮ್ ಯಾತ್ರೆ ಪ್ರಾರಂಭವಾಗಿದೆ.
ಗಂಗೋತ್ರಿ ದೇವಾಲಯದ ದ್ವಾರಗಳು ಮಧ್ಯಾಹ್ನ 12:15 ಕ್ಕೆ ಮತ್ತು ಯಮುನೋತ್ರಿ ದೇವಾಲಯದ ದ್ವಾರಗಳು ಮಧ್ಯಾಹ್ನ 12:35 ಕ್ಕೆ ವೇದ ಮಂತ್ರಗಳ ಪಠಣದೊಂದಿಗೆ ತೆರೆದವು. ಬಾಗಿಲುಗಳು ತೆರೆದಾಗ ನೂರಾರು ಭಕ್ತರು ಘೋಷಣೆ ಕೂಗಿ ಭಕ್ತಿ ಪ್ರದರ್ಶಿಸಿದರು.

ಉತ್ತರಕಾಶಿ ಜಿಲ್ಲೆಯ ಎರಡೂ ದೇವಾಲಯಗಳಲ್ಲಿ ಮೊದಲ ಪ್ರಾರ್ಥನೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಸಲ್ಲಿಸಲಾಯಿತು. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಗಂಗೋತ್ರಿ ದೇಗುಲದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ದೇಶದ ಸಮೃದ್ಧಿಗಾಗಿ ಪ್ರಾರ್ಥಿಸಿದರು. ಸುರಕ್ಷಿತ ಮತ್ತು ಸುಗಮ ಯಾತ್ರೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ವ್ಯವಸ್ಥೆಗಳನ್ನು ಮಾಡಿದೆ ಎಂದು ಧಾಮಿ ತಿಳಿಸಿದ್ದಾರೆ. ಹಸಿರು ಮತ್ತು ಸ್ವಚ್ಛ ಯಾತ್ರೆಯನ್ನು ಬೆಂಬಲಿಸುವಂತೆ ಭಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ಬದರಿನಾಥ, ಕೇದಾರನಾಥ ಮತ್ತು ಗಂಗೋತ್ರಿ ಎಂಬ ಮೂರು ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶಕ್ಕೆ ನಿರ್ಬಂಧಗಳನ್ನು ವಿಧಿಸಲಾಗಿದೆ. ಗಂಗೋತ್ರಿ ದೇವಾಲಯ ಸಮಿತಿಯು, ಸನಾತನಿಗಳಲ್ಲದವರು ಆವರಣಕ್ಕೆ ಪ್ರವೇಶಿಸಲು ‘ಪಂಚಗವ್ಯ’ (ಗೋಮೂತ್ರ, ಸಗಣಿ, ಹಾಲು, ಮೊಸರು ಮತ್ತು ತುಪ್ಪದ ಸಂಯೋಜನೆ) ಸೇವಿಸಬೇಕೆಂದು ಆದೇಶಿಸಿದೆ.

Leave a Reply

Your email address will not be published. Required fields are marked *

error: Content is protected !!