
ಉದಯವಾಹಿನಿ ಪೀಣ್ಯ ದಾಸರಹಳ್ಳಿ: ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡಿನ ಮಾರುತಿ ನಗರದ ಭೀಮ ಸಂದೇಶ ಕನ್ನಡ ಪತ್ರಿಕೆಯ ಸಂಪಾದಕ ವೈ ಜಿ ನರಸಿಂಹ ಮೂರ್ತಿ ಅವರ ನೇತೃತ್ವದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ರವರ,ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಮ್ ಮತ್ತು ವಿಶ್ವ ಪತ್ರಿಕಾ ದಿನಾಚರಣೆ ಪೀಣ್ಯ 2ನೇ ಹಂತ ಎಂ ಇ ಎಸ್ ಶಾಲೆ ಹತ್ತಿರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯ ಕ್ರಮದ ಪ್ರಯುಕ್ತ ಸರ್ಕಾರಿ ನಿವೃತ್ತ ನೌಕರ ಹಾಗೂ ರಾಜೇಶ್ವರಿ ವಾರ್ಡಿನ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಎನ್ ಅಮರೇಶ್ ಅವರಿಗೆ ಡಾ. ಅಂಬೇಡ್ಕರ್ ಜಯಂತಿ ಆಯೋಜಕ ವೈ ಜಿ ನರಸಿಂಹ ಮೂರ್ತಿ ಅಮರೇಶ್ ಅವರಿಗೆ ಶಾಲು ಹೊದಿಸಿ ಮೈಸೂರು ಪೆಟೆ ಧರಿಸಿ ಫಲಪುಷ್ಪದೊಂದಿಗೆ ಗೌರವಿಸಿ ಅಂಬೇಡ್ಕರ್ ಭಾವ ಚಿತ್ರಯುಳ್ಳ ನೆನೆಪಿನ ಕಾಣಿಕೆ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಅಯ್ಯಣ್ಣ ಮಾಸ್ಟರ್, ಅಂತಾರಾಷ್ಟ್ರೀಯ ಹಿಂದೂ ಪರಿಷತ್ ರಾಷ್ಟ್ರೀಯ ಬಜರಂಗದಳದ ಕಾರ್ಯದರ್ಶಿ ಶ್ರೀಕಾಂತ್ ಸೇರಿದಂತೆ ಮುಂತಾದವರು ಇದ್ದರು.
