ಉದಯವಾಹಿನಿ, ಹೈದರಾಬಾದ್ (ತೆಲಂಗಾಣ): ಮಕ್ಕಳ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರು ಹೈದರಾಬಾದ್ನ ಹಲವು ಆಸ್ಪತ್ರೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಗುಜರಾತ್ ಪೊಲೀಸರು ಈಗಾಗಲೇ ಮುರುಗನ್ ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ಆ ಗ್ಯಾಂಗ್ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಹೈದರಾಬಾದ್ನಲ್ಲಿ ದಾಳಿ ನಡೆಸಿದ್ದಾರೆ.ಇಲ್ಲಿ ಮುರುಗನ್ ಗ್ಯಾಂಗ್ಗೆ ಯಾರು ಸಹಾಯ ಮಾಡುತ್ತಿದ್ದಾರೆ ಎಂದು ಕಂಡುಹಿಡಿಯಲು ಶೋಧ ನಡೆಸಲಾಯಿತು. ಕೂಕಟ್ಪಲ್ಲಿ, ಬಂಜಾರಾ ಹಿಲ್ಸ್ ಮತ್ತು ಸಿಕಂದರಾಬಾದ್ನಲ್ಲಿರುವ ಕೆಲವು ಫರ್ಟಿಲಿಸಿ ಕೇಂದ್ರಗಳಲ್ಲಿ ಏಕಕಾಲದಲ್ಲಿ ತಪಾಸಣೆ ನಡೆಸಲಾಯಿತು.
ಕಳೆದ ವರ್ಷ, ಆರೋಪಿ ಮುರುಗನ್ ಆದಿಲಾಬಾದ್ ಜಿಲ್ಲೆಯ ಇಟ್ಟಿಗೆ ಗೂಡುಗಳಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಮಕ್ಕಳನ್ನು ಇತರೆ ರಾಜ್ಯಗಳಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ. ಆತನನ್ನು ಬಂಧಿಸಿ 3 ತಿಂಗಳ ನಂತರ ಬಿಡುಗಡೆ ಮಾಡಲಾಯಿತು. ಕಳೆದ ವರ್ಷ ಚೈತನ್ಯಪುರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮುರುಗನ್ ಹೆಸರು ಕೂಡ ಬೆಳಕಿಗೆ ಬಂದಿತು. ಮುರುಗನ್ ಪತ್ನಿ ಕೃಷ್ಣವೇಣಿ ಮತ್ತೊಂದು ಗ್ಯಾಂಗ್ ನಡೆಸುತ್ತಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದರು. ಮತ್ತೊಂದೆಡೆ, ಮುರುಗನ್ ಗ್ಯಾಂಗ್ ಅನ್ನು ಈಗಾಗಲೇ ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಅವರು ನೀಡಿದ ಮಾಹಿತಿಯ ಆಧಾರದ ಮೇಲೆ ಹೈದರಾಬಾದ್ನಲ್ಲಿ ದಾಳಿ ನಡೆಸಲಾಗಿದೆ. ಮುರುಗನ್ ಗ್ಯಾಂಗ್ ಒಂದೇ ವರ್ಷದಲ್ಲಿ 25 ಮಕ್ಕಳನ್ನು ಮಾರಾಟ ಮಾಡಿದೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಇವರು ದೇಶಾದ್ಯಂತ ಮಕ್ಕಳ ಕಳ್ಳಸಾಗಣೆ ಗ್ಯಾಂಗ್ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
