ಉದಯವಾಹಿನಿ, ಕೋಲ್ಕತ್ತಾ: ಪ್ರತಿಪಕ್ಷಗಳ ಮೈತ್ರಿಕೂಟ “ಇಂಡಿಯಾ” ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವ್ಯಂಗ್ಯಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು “ಇಂಡಿಯಾ” ಮೈತ್ರಿ ದೇಶದ ಪರವಾಗಿದೆ ಎಂದಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಗೆಲುವು ನಿಶ್ಚಿತ. ಬಿಜೆಪಿಗೆ ಮನೆ ಹಾದಿ ತೋರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೆಹಲಿ ಸರ್ಕಾರದ ಅಧಿಕಾರಿಗಳ ಮೇಲಿನ ನಿಯಂತ್ರಣ ಕಸಿದುಕೊಳ್ಳುವ ಉದ್ದೇಶಿತ ಕಾನೂನಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷ ಬೆಂಬಲಿಸದಂತೆ ವಿರೋಧ ಪಕ್ಷಗಳ ಮೈತ್ರಿಕೂಟದ ಪಕ್ಷಗಳಿಗೆ ಅಮಿತ್ ಶಾ ಮನವಿ ಮಾಡಿದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು ಬಿಜೆಪಿ ಹಿಂಸಾಚಾರ ಬೆಂಬಲಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. “ನಮ್ಮ ಮೈತ್ರಿ ಹೊಸದು. ದೇಶಾದ್ಯಂತ ಅಸ್ತಿತ್ವವನ್ನು ಹೊಂದಿದ್ದೇವೆ. ಖಂಡಿತವಾಗಿ, ಕೇಂದ್ರದಲ್ಲಿ ಸರ್ಕಾರ ರಚನೆ ಮಾಡುತ್ತೇವೆ. ಇಂಡಿಯಾ ಒಕ್ಕೂಟ ದೇಶದಾದ್ಯಂತ ಅಸ್ತಿತ್ವವನ್ನು ಹೊಂದಿದೆ ಮತ್ತು “ವಿಪತ್ತು, ಕೋಮು ಉದ್ವಿಗ್ನತೆ ಮತ್ತು ನಿರುದ್ಯೋಗದಿಂದ” ದೇಶವನ್ನು ಉಳಿಸಲು ಅದು ಗೆಲ್ಲಬೇಕು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!