ಉದಯವಾಹಿನಿ,ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ದೆಹಲಿಯ ತುಘಲಕ್‌ ರಸ್ತೆಯ ಸರ್ಕಾರಿ ಬಂಗಲೆಗೆ ವಾಪಸ್ ಆಗುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಅಸ್ಸಾಂ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಲು ಅವರು ಎಐಸಿಸಿ ಕೇಂದ್ರ ಕಚೇರಿಗೆ ಆಗಮಿಸಿದ್ದಾರೆ. ಇದೇ ವೇಳೆ ಸರ್ಕಾರಿ ಬಂಗಲೆಗೆ ಮರಳುತ್ತಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಡೀ ಭಾರತವೇ ನನ್ನ ಮನೆ’ ಎಂದು ಹೇಳಿದ್ದಾರೆ. ರಾಹುಲ್‌ ಅಪರಾಧಿ ಎಂದು ಸೂರತ್ ಕೋರ್ಟ್‌ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್‌ ತಡೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ರಾಹುಲ್‌ ಅವರ ಲೋಕಸಭೆ ಸದಸ್ಯತ್ವ ಮರುಸ್ಥಾಪಿಸಿದ್ದು, ಕಲಾಪದಲ್ಲಿಯೂ ಪಾಲ್ಗೊಂಡಿದ್ದಾರೆ. ಇದರಿಂದಾಗಿ ರಾಹುಲ್, ಸರ್ಕಾರಿ ಬಂಗಲೆಗೆ ವಾಪಸ್ ಆಗಲಿದ್ದಾರೆ. ಕಳೆದ 19 ವರ್ಷಗಳಿಂದ ಅವರು ಇದೇ ಮನೆಯಲ್ಲಿ ನೆಲೆಸಿದ್ದರು.

Leave a Reply

Your email address will not be published. Required fields are marked *

error: Content is protected !!