
ಉದಯವಾಹಿನಿ ಪೀಣ್ಯ ದಾಸರಹಳ್ಳಿ: ಕ್ಷೇತ್ರದ ಕೈಗಾರಿಕಾ ಪ್ರದೇಶ ವಾರ್ಡಿನ ವ್ಯಾಪ್ತಿಗೆ ಬರುವ ನೆಲಗದರನಹಳ್ಳಿ ಪ್ರಸಿದ್ದ ಮತ್ತು ಹೆಸರು ವಾಸಿಯಾಗಿದ ಮತ್ತು ಬಡ ವಿದ್ಯಾರ್ಥಿಗಳಿಗೆ ಹೊರೆ ಆಗದಂತೆ ನೋಡಿ ಕೊಂಡು ಹೋಗುವ ಯಾವುದಾದರೂ ಶಿಕ್ಷಣ ಇದ್ದರೆ ಅದು ನಿಸರ್ಗ ಶಿಕ್ಷಣ ಸಂಸ್ಥೆ ಸಂಸ್ಥೆಯ ಅಧ್ಯಕ್ಷ ಹಾಗೂ ಕೈಗಾರಿಕಾ ಪ್ರದೇಶ ವಾರ್ಡಿನ ಬಿಜೆಪಿ ಅಧ್ಯಕ್ಷ ನಿಸರ್ಗ ಕೆಂಪರಾಜು ಅವರಿಗೆ ಮಾರುತಿ ನಗರದ ಭೀಮ ಸಂದೇಶ ಕನ್ನಡ ಪತ್ರಿಕೆಯ ಸಂಪಾದಕ ವೈ ಜಿ ನರಸಿಂಹ ಮೂರ್ತಿ ಅವರ ನೇತೃತ್ವದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ರವರ,ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಮ್ ಮತ್ತು ವಿಶ್ವ ಪತ್ರಿಕಾ ದಿನಾಚರಣೆ ಅಂಗವಾಗಿ ನಿಸರ್ಗ ಕೆಂಪರಾಜು ಅವರಿಗೆ ಡಾ. ಅಂಬೇಡ್ಕರ್ ಜಯಂತಿ ಆಯೋಜಕ ವೈ ಜಿ ನರಸಿಂಹಮೂರ್ತಿ ನಿಸರ್ಗ ಕೆಂಪರಾಜುರವರಿಗೆ ಶಾಲು ಹೊದಿಸಿ ಮೈಸೂರು ಪೆಟೆ ಧರಿಸಿ ಫಲಪುಷ್ಪದೊಂದಿಗೆ ಗೌರವಿಸಿ ಅಂಬೇಡ್ಕರ್ ಭಾವ ಚಿತ್ರಯುಳ್ಳ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ನ್ಯೂಸ್ ಪ್ರೆಸ್ ಕ್ಲಬ್ ಅಧ್ಯಕ್ಷ ಅಯ್ಯಣ್ಣ ಮಾಸ್ಟರ್, ಡಾ.ಶಿವಕುಮಾರ್, ಅಂತಾರಾಷ್ಟ್ರೀಯ ಹಿಂದೂ ಪರಿಷತ್ ರಾಷ್ಟ್ರೀಯ ಬಜರಂಗದಳದ ಕಾರ್ಯದರ್ಶಿ ಶ್ರೀಕಾಂತ್ ಸೇರಿದಂತೆ ಮುಂತಾದವರು ಇದ್ದರು.
