ಉದಯವಾಹಿನಿ ದೇವರಹಿಪ್ಪರಗಿ: ಸಮಯಕ್ಕೆ ಸರಿಯಾಗಿ ಬಸ್ ಬರುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಶನಿವಾರದಂದು ನಡೆದಿತ್ತು.ಈ ಕುರಿತು ಪತ್ರಿಕೆಯಲ್ಲಿ ವರದಿ ಪ್ರಸಾರವಾಗಿತ್ತು. ವರದಿಗೆ ಸ್ಪಂದಿಸಿದ ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಇಲಾಖೆ ಅಧಿಕಾರಿಗಳಿಗೆ ಸಮಸ್ಯೆ ಸರಿಪಡಿಸಲು ಸೂಚಿಸಿದ್ದರು. ಇಲಾಖೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಬಸ್ಸಿನ ವ್ಯವಸ್ಥೆ ಕಲ್ಪಿಸಿ, ಬಸ್ ರೂಟುಗಳನ್ನು ಹೆಚ್ಚಿಸಿದ್ದಾರೆ ಹಾಗೂ ಕಂಟ್ರೋಲ್ ರೂಮಿಗೆ ಇಬ್ಬರು ಸಿಬ್ಬಂದಿಗಳನ್ನು ನಿಯೋಜನೆ ಮಾಡುವ ಮೂಲಕ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿದ್ದ ವರದಿಗಾರರಿಗೆ ಧನ್ಯವಾದ ತಿಳಿಸಿದ್ದಾರೆ.
ಶಾಲಾ ಕಾಲೇಜಿಗೆ ಸರಿಯಾದ ಸಮಯಕ್ಕೆ ಬಂದು ಹೋಗಲು ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಟ್ಟ ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರಿಗೆ ಹಾಗೂ ಇಲಾಖೆ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ಶಾಸಕರು ಹಾಗೂ ಮೇಲಾಧಿಕಾರಿಗಳ ಸೂಚನೆ ಮೇರೆಗೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಇಬ್ಬರು ಕಂಟ್ರೋಲರ್ ನಿಯೋಜನೆ ಮಾಡಲಾಗಿದೆ, ಮುಳಸಾವಳಗಿ ಹಾಗೂ ಇಬ್ರಾಹಿಂಪುರ ರೂಟಿಗೆ ಹೆಚ್ಚಿನ ಬಸ್ ಬಿಡುವುದರಿಂದ ಪ್ರಯಾಣಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಾಗುವುದು. ಇಲಾಖೆ ಜೊತೆ ಸಾರ್ವಜನಿಕರು ಸಹಕರಿಸಬೇಕೆಂದು ಸಿಂದಗಿ ಘಟಕದ ವ್ಯವಸ್ಥಾಪಕರಾದ ರೇವಣಸಿದ್ಧ ಖೈನೂರ ಹೇಳಿದರು.

Leave a Reply

Your email address will not be published. Required fields are marked *

error: Content is protected !!