
ಉದಯವಾಹಿನಿ,ದೇವರಹಿಪ್ಪರಗಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ ಪಡಗಾನೂರ ಕ್ರಾಸ್ ಬಳಿ ಇರುವ ದಾವಲ್ ಸಾಬ್ ಇಟ್ಟಂಗಿ ಬಟ್ಟಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.ದೇವರಹಿಪ್ಪರಗಿ ಪಟ್ಟಣದ ನಿವಾಸಿಗಳಾದ ಅಂಬರೀಶ್ ಮಲ್ಕಣ್ಣ ಆರೂಗೇರಿ (25) ಇಂದಿರಾ ಬಾಯಿ ಮಲ್ಕಣ್ಣ ಆರೂಗೇರಿ (53) ಮೃತ ದುರ್ದೈವಿ ಗಳಾಗಿದ್ದಾರೆ. ಅಂಬುಲೆನ್ಸ್ ಮೂಲಕ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಉಳಿದಂತೆ ಕಾರಿನಲ್ಲಿದ್ದ ಅಜ್ಜಿ ಹಾಗೂ ಮೊಮ್ಮಗಳಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಪಟ್ಟಣದಿಂದ ಬುಧವಾರ ಬೆಳಗ್ಗೆ ವಿಜಯಪುರಕ್ಕೆ ಅಜ್ಜಿಯ ಕಣ್ಣು ತೋರಿಸಲು ತೆರಳುವಾಗ ಬೆಳಗ್ಗೆ 6:30 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದರು.ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.
